ಕೆ ಆರ್ ಪೇಟೆ: ಕೆ‌ ಇ ಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಅವಘಡದಿಂದ ಜೀವವೊಂದು ಬಲಿಯಾಗಿದೆ

ಕೆ ಆರ್ ಪೇಟೆ: ಕೆ‌ ಇ ಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಅವಘಡದಿಂದ ಜೀವವೊಂದು ಬಲಿಯಾಗಿದೆ

ಕೆ ಆರ್ ಪೇಟೆ ತಾಲ್ಲೂಕಿನ ಕಸಬಾ ಹೋಬಳಿ ಅರೆಬೂವನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ ಅವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ.

ಈಗಾಗಲೇ ತಾಲ್ಲೂಕಿನಾದ್ಯಂತ ವಿದ್ಯುತ್ ನಿಂದ ಹಲವಾರು ಜೀವಗಳು ಬಲಿಯಾಗುತ್ತಿದ್ದರೂ ತಾಲ್ಲೂಕಿನ ಕೆ ಇ ಬಿ ಇಲಾಖೆಯವರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಹಾಗೂ ಅರೆಬೂವನಹಳ್ಳಿ ಗ್ರಾಮಸ್ಥರು ದೂರಿದರು.ಇದನ್ನು ಸರಿಪಡಿಸಬೇಕು.

ಮೃತರಿಗೆ ಪತ್ನಿ ಸೇರಿದಂತೆ ಮಕ್ಕಳು ಅಘಾತಕ್ಕೆ ಈಡಾಗಿದ್ದಾರೆ.ತಕ್ಷಣ ಕೆ ಇ ಬಿ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತವಾದ ಪರಿಹಾರವನ್ನು ನೀಡಬೇಕು‌.ಇಲ್ಲದಿದ್ದರೆ ಕೆ‌ ಇ ಬಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗರೆ ರಾಜೇಗೌಡ ಹಾಗೂ ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಪಂಚಾಯತಿ ಮಾಜಿ‌ ಅಧ್ಯಕ್ಷ ಚೌಡೇನಹಳ್ಳಿ ನಾಗರಾಜು,ವಕೀಲ ಕುರುಬಳ್ಳಿ ನಾಗೇಶ್, ಮಂಚನಹಳ್ಳಿ ನಾಗೇಗೌಡ

ಇತರರು ಇದ್ದರು.

What's Your Reaction?

like

dislike

love

funny

angry

sad

wow