ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಅಹಿಂದ ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಸಾಮಾಜಿಕ ನ್ಯಾಯದ ಹರಿಕಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳ ಹಿತ ಕಾಪಾಡಿ ಸೂಕ್ತ ಸ್ಥಾನಮಾನ ಕೊಡಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೇಸ್ ವಿರುದ್ಧವಾಗಿ ಮತ ಚಲಾಯಿಸಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ. ಪ್ರೇಮಕುಮಾರ್ ಎಚ್ಚರಿಕೆ ನೀಡಿದರು

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಅಹಿಂದ ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಸಾಮಾಜಿಕ ನ್ಯಾಯದ ಹರಿಕಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳ ಹಿತ ಕಾಪಾಡಿ ಸೂಕ್ತ ಸ್ಥಾನಮಾನ ಕೊಡಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೇಸ್ ವಿರುದ್ಧವಾಗಿ ಮತ ಚಲಾಯಿಸಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ. ಪ್ರೇಮಕುಮಾರ್ ಎಚ್ಚರಿಕೆ ನೀಡಿದರು

*ಕಾಂಗ್ರೆಸ್ ಪಕ್ಷದಿಂದ ಅಹಿಂದ ವರ್ಗಗಳ ಕಡಗಣನೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಅನ್ಯಾಯ ಸರಿಪಡಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವ ಎಚ್ಚರಿಕೆ ನೀಡಿದ ಅಹಿಂದ ವರ್ಗಗಳ ನಾಯಕರು* .

*ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಅಹಿಂದ ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಸಾಮಾಜಿಕ ನ್ಯಾಯದ ಹರಿಕಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳ ಹಿತ ಕಾಪಾಡಿ ಸೂಕ್ತ ಸ್ಥಾನಮಾನ ಕೊಡಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೇಸ್ ವಿರುದ್ಧವಾಗಿ ಮತ ಚಲಾಯಿಸಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ. ಪ್ರೇಮಕುಮಾರ್ ಎಚ್ಚರಿಕೆ ನೀಡಿದರು* .

ಅವರು ಇಂದು ಕೆ. ಆರ್. ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಅಹಿಂದ ವರ್ಗಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

ಕೆ.ಆರ್.ಪೇಟೆ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಸೂಕ್ತವಾದ ರಾಜಕೀಯ ಸ್ಥಾನ ಮಾನವೇ ಸಿಕ್ಕಿಲ್ಲ, ಕಳೆದ ಮೂರು ಅವಧಿಯಿಂದ ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ಸದಸ್ಯನಾಗಿ ಚುನಾಯಿತ ನಾಗಿರುವ ನನ್ನನ್ನು ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಕಡೆಗಣಿಸಿದೆ. ಪಕ್ಷ ಸೇರಿದಂತೆ ರಾಜ್ಯ ಸರ್ಕಾರದ ಯಾವುದೇ ಸರ್ಕಾರಿ ನಾಮಕರಣದಲ್ಲಿ ಸ್ಥಾನ ನೀಡದೆ ಕಡೆಗಣಿಸಲಾಗಿದೆ, ಸ್ಥಳೀಯ ಕಾಂಗ್ರೆಸ್ ನಾಯಕರು ಗುಂಪುಗಾರಿಕೆ ನಡೆಸುತ್ತಾ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಅಧಿಕಾರದಿಂದ ದೂರವಿಟ್ಟು ತಮಾಷೆ ನೋಡುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ತಾಲೂಕಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ನಾವು ಸಂಘಟಿತರಗಿ ನಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಾಂಗ್ರೆಸ್ ಎಸ್. ಸಿ ಘಟಕದ ಅಧ್ಯಕ್ಷ ರಾಜಯ್ಯ ಮಾತನಾಡಿ ಚುನಾವಣೆಯ ಸಂಧರ್ಭದಲ್ಲಿ ಅಹಿಂದ ವರ್ಗವನ್ನು ಬಳಸಿಕೊಳ್ಳುವ ಮುಖಂಡರು ಚುನಾವಣೆಯ ನಂತರ ಸಂಪೂರ್ಣವಾಗಿ ಕಡೆಗಣಿಸುತ್ತಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಚಲುವರಾಯಸ್ವಾಮಿ ಅವರು ಗಮನ ಹರಿಸಿ ಅಹಿಂದ ವರ್ಗಗಳಿಗಾಗಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಮುಖಂಡರಾದ ಶಿವಣ್ಣ, ಫಯಾಜ್, ಕಾಂತರಾಜು, ಹರಿಹರಪುರ ಶ್ರೀನಿವಾಸ್, ಜೆಡಿಎಸ್ ಮುಖಂಡ ಸೋಮಸುಂದರ್, ನರಸಿಂಹ, ಬಿಜೆಪಿ ಮುಖಂಡರಾದ ಅಗ್ರಹಾರ ಬಾಚಹಳ್ಳಿ ಜಗಧೀಶ್, ಕಮಲಾಕ್ಷಿ, ಫೋಟೋ ವಿಷ್ಣು, ಕಿಕ್ಕೇರಿರಾಜಣ್ಣ, ನರೇಂದ್ರನಾಯಕ, ಭಾರತೀಪುರ ಮಹದೇವ್, ಸತೀಶ್, ದೊಡ್ಡ ನಿಂಗನಾಯಕ, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ನಟರಾಜು, ಮುದುಗೆರೆ ಮಹೇಂದ್ರ, ಚೌಡನಹಳ್ಳಿದೇವರಾಜು, ಕುಮಾರ್, ತಮಣ್ಣ, ಶಂಕರ್, ಕೋಟಹಳ್ಳಿ ಶಿವಣ್ಣ, ಶಂಭುಲಿಂಗ,ಬಸವೇಶ, ಬನ್ನಾರಿ, ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗಣೇಶ ಸೇರಿದಂತೆ ನೂರಾರು ಜನರು ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

 *ವರದಿ.ರಾಜು ಜಿಪಿ ಕಿಕ್ಕೇರಿ ಕೆ ಆರ್ ಪೇಟೆ,* .

What's Your Reaction?

like

dislike

love

funny

angry

sad

wow