*ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ

*ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ

ಹೊಸಳ್ಳಿ ಯೋಜನಾ ಕಚೇರಿ ವ್ಯಾಪ್ತಿಯ ಬೂದನೂರು ವಲಯದ ಬಿ ಗೌಡಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಪ್ರಶಾಂತ್ ರವರು ವಹಿಸಿದ್ದರು.

ತಾಲೂಕು ಯೋಜನಾಧಿಕಾರಿಗಳಾದ ಗಿರೀಶ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. 

ನಂತರ ಮಾತನಾಡಿದ ಅವರು ಶಾಲಾ ಮಕ್ಕಳಿಗೆ ಭವಿಷ್ಯತ್ತಿನಲ್ಲಿ ಪರಿಸರ ಉಳಿಸುವ ಬಗ್ಗೆ ಹಾಗೂ ಗಿಡ ನಾಟಿ ಮಾಡುವ ಬಗ್ಗೆ ಮಾಹಿತಿ ನೀಡಿದರು. 

ಶಾಲೆಯಲ್ಲಿ ಮಕ್ಕಳಿಗೆ ಪರಿಸರದ ಕುರಿತು ವಿವಿದ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿದ್ದು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌಡಗೆರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್, ಶಾಲಾ ಮುಖ್ಯೋಪಾಧ್ಯರಾದ ಲಿಂಗರಾಜು,ವಲಯದ ಮೇಲ್ವಿಚಾರಕರದ ಅಶೋಕ್,ಕೃಷಿ ಮೇಲ್ವಿಚಾರಕರು ಲೋಕೇಶ್, ಶಾಲಾ ಸಿಬ್ಬಂದಿಗಳು ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದ

ರು.

What's Your Reaction?

like

dislike

love

funny

angry

sad

wow