*ಕೆ.ಆರ್.ಪೇಟೆ ಗ್ರಾಮ ದೇವತೆ ಶ್ರೀದೊಡ್ಡಕೇರಮ್ಮ ದೇವಿಯ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀ ರಥದ ಲೋಕಾರ್ಪಣೆ ಸಮಾರಂಭ ಅದ್ದೂರಿಯಾಗಿ ನಡೆಯಿತು*.

*ಕೆ.ಆರ್.ಪೇಟೆ ಗ್ರಾಮ ದೇವತೆ ಶ್ರೀದೊಡ್ಡಕೇರಮ್ಮ ದೇವಿಯ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀ ರಥದ ಲೋಕಾರ್ಪಣೆ ಸಮಾರಂಭ ಅದ್ದೂರಿಯಾಗಿ ನಡೆಯಿತು*.

ಮೈಸೂರು ಕೊಡಗು ಲೋಕಸಭಾ ಸದಸ್ಯರು ಹಾಗೂ ಮೈಸೂರು ಮಹಾರಾಜರಾದ ಶ್ರೀ ಯಧುವಿರ್ ಕೃಷ್ಣಧತ್ತ ಚಾಮರಾಜ ಒಡೆಯರ್ ದೇವಾಲಯದ ಗೋಪುರದ ಕಳಸ ಪ್ರತಿಷ್ಠಾಪನೆ ಕಾರ್ಯದಲ್ಲಿ ಭಾಗವಹಿಸಿ ಗ್ರಾಮಸ್ಥರು ನೀಡಿದ ಆತ್ಮೀಯ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಪ್ರತಿಬಿಂಬವಾಗಿರುವ ದೇವಾಲಯಗಳ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದೆ. ಮಾನವರಾದ ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯು ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೂಡ ಲಭಿಸುತ್ತದೆ. ನಮ್ಮ ಪೂರ್ವಿಕರಿಂದ ಕೊಡುಗೆಯಾಗಿ ಬಂದಿರುವ ಆಚಾರ ವಿಚಾರಗಳನ್ನು ಪಾಲಿಸುವ ಜೊತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ವಿಚ್ಚಿದ್ರಕಾರಿ ಶಕ್ತಿಗಳನ್ನು ಬಗ್ಗು ಬಡಿಯುವ ಜೊತೆಗೆ ನಮ್ಮ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಲು ಸದಾ ಜಾಗೃತರಾಗಿರಬೇಕು ಎಂದು ಮಹಾರಾಜ ಯಧುವೀರ್ ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ದಾನಿಗಳು ಹಾಗೂ ಗಣ್ಯರನ್ನು ಸಂಸದರಾದ ಯಧುವೀರ್ ಸನ್ಮಾನಿಸಿ ಗೌರವಿಸಿದರು.

ಕೆ.ಆರ್.ಪೇಟೆ ಗ್ರಾಮದ ಯಜಮಾನರಾದ ಹೆಗ್ಗಡಿ ಕೆ. ಎನ್.ಕೃಷ್ಣ, ಪಟೇಲ್ ಚಂದ್ರಣ್ಣ, ಉಧ್ಯಮಿ ಹೆಚ್.ಎಂ. ಚಂದ್ರಶೇಖರ್ ಹಾಗೂ ಮಾಜಿ ಸಚಿವ ಡಾ.ನಾರಾಯಣಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು.

ರಾಜ್ಯದ ಮಾಜಿ ಸಚಿವ ಡಾ. ನಾರಾಯಣ ಗೌಡ ಮೈಸೂರು ಸಂಸ್ಥಾನದಿಂದ ಹಾಗೂ ರಾಜ ಮನೆತನದಿಂದ ಕೆ.ಆರ್.ಪೇಟೆ ಪಟ್ಟಣಕ್ಕೆ ಅಪಾರವಾದ ಕೊಡುಗೆಯಿದೆ. ಇಂದು ನಮ್ಮೂರಿನ ಗ್ರಾಮದೇವತೆ ದೇವಾಲಯದ ಉದ್ಘಾಟನೆಗೆ ಸ್ವತಃ ಮಹಾರಾಜರೇ ಬಂದಿರುವುದರಿಂದ ನಮ್ಮೂರಿನ ಭಾಗ್ಯದ ಬಾಗಿಲು ತೆರೆಯಲಿದೆ. ಗ್ರಾಮಸ್ಥರಿಗೆ ಅಪಾರ ಸಂತೋಷವಾಗಿದೆ ಎಂದು ಅಭಿಮಾನದಿಂದ ಹೇಳಿದರು.

ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಮೂಡ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ಪಂಕಜಾ, ಉಪಾಧ್ಯಕ್ಷೆ ಸೌಭಾಗ್ಯ, ಸ್ಥಾಯಿ ಸಮಿತಿಯ ಅಧ್ಯಕ್ಷ ರವೀಂದ್ರಬಾಬು, ಪುರಸಭೆ ಸದಸ್ಯ ಪ್ರಮೋದ್ ಕುಮಾರ್, ಕೆ.ಸಿ.ಮಂಜುನಾಥ್, ನಟರಾಜ್, ಇಂದ್ರಾಣಿ, ಸುಗುಣ ರಮೇಶ್, ಮಹಾದೇವಿ ನಂಜುಂಡ, ಬಸ್ ಸಂತೋಷ್ ಕುಮಾರ್, ಕೆ.ಎಸ್. ರಾಮೇಗೌಡ, ಆರ್.ಟಿ.ಓ ಮಲ್ಲಿಕಾರ್ಜುನ ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಸ್ಕೃತಿ ಸಂಘಟಕ ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಅವಧಾನಿಗಳು ಪೂಜಾ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು.

*ವರದಿ, ರಾಜು ಜಿ ಪಿ ಕಿಕ್ಕೇರಿ ಕೆ ಆರ್ ಪೇಟೆ*

What's Your Reaction?

like

dislike

love

funny

angry

sad

wow