*ಕೆ.ಆರ್.ಪೇಟೆ ಪಟ್ಟಣದಲ್ಲಿ ನ್ಯೂ ಅಪೂರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭ. ಆಸ್ಪತ್ರೆ ಉದ್ಘಾಟಿಸಿ ಶುಭ ಕೋರಿದ ಸುತ್ತೂರು ಹಾಗೂ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀಗಳು* .

*ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ವಿಶ್ವದಲ್ಲಿಯೇ ಯಾವುದೂ ಇಲ್ಲವಾದ್ದರಿಂದ ಶ್ರೀ ಸಾಮಾನ್ಯರು ತಮ್ಮ ಅಮೂಲ್ಯವಾದ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು ಎಂದು ತುರುವೇಕೆರೆ ಕ್ಷೇತ್ರದ ಮಾಜಿಶಾಸಕರಾದ ಎಂ.ಡಿ. ಲಕ್ಷ್ಮೀನಾರಾಯಣ ಹೇಳಿದರು*.
ಅವರು ಕೆ.ಆರ್.ಪೇಟೆ ಪಟ್ಟಣದ ಮೈಸೂರು ರಸ್ತೆಯ ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿ ನೂತನವಾಗಿ ಆರಂಭವಾದ ನ್ಯೂ ಅಪೂರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಇಂದಿನ ದಿನಮಾನದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ರಕ್ತದೊತ್ತಡ, ಸಕ್ಕರೆ ಖಾಯಿಲೆ, ಕ್ಯಾನ್ಸರ್, ಜ್ವರ, ಶೀತದಂತಹ ಖಾಯಿಲೆಗಳು ಸರ್ವೇ ಸಾಮಾನ್ಯವಾಗಿವೆ. ಆದ್ದರಿಂದ ಕುಡಿಯಲು ಶುದ್ಧವಾದ ನೀರನ್ನು ಬಳಸಿ, ಶುಚಿ ರುಚಿಯಾದ ಆಹಾರ ಪದಾರ್ಥಗಳನ್ನು ಸೇವಿಸಿ ಅಮೂಲ್ಯವಾದ ಆರೋಗ್ಯದ ರಕ್ಷಣೆಗೆ ಮುಂದಾಗಬೇಕು ಎಂದು ಲಕ್ಷ್ಮೀನಾರಾಯಣ ಕಿವಿಮಾತು ಹೇಳಿದರು.
ಮೈಸೂರಿನ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಕೆ.ಆರ್. ಪೇಟೆ ತಾಲೂಕು ಕೇಂದ್ರದಲ್ಲಿ ಮೈಸೂರು ಬೆಂಗಳೂರು ಮಹಾನಗರಗಳಲ್ಲಿ ಇರುವಂತಹ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮವಾದ ಆರೋಗ್ಯ ಸೇವೆ ನೀಡಲು ಆರಂಭವಾಗುತ್ತಿರುವುದು ಸಂತೋಷದ ವಿಷಯವಾಗಿದೆ. ಆಸ್ಪತ್ರೆ ಆರಂಬಿಸುವ ಸಾಹಸ ಕಾರ್ಯಕ್ಕೆ ಮುಂದಾಗಿರುವ ಅನಿಲ್ ಹಾಗೂ ಬೋರೇಗೌಡ ಆವರಿಗೆ ಶುಭವಾಗಲಿ ಎಂದು ಶುಭ ಹಾರೈಸಿದರು.
ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೂಜ್ಯ ಶ್ರೀಗಳಾದ ಡಾ.ನಿಶ್ಚಲಾ ನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಕೆ.ಆರ್.ಪೇಟೆ ಪಟ್ಟಣದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಆರಂಭವಾಗುತ್ತಿರುವುದು ಸಂತೋಷದ ಸಂಗತಿಯಾಗಿದೆ. ತಾಲೂಕಿನ 326 ಹಳ್ಳಿಗಳ ಜನರು ಮೈಸೂರು ಬೆಂಗಳೂರು ನಗರಗಳ ವ್ಯಾಮೋಹಕ್ಕೆ ಒಳಗಾಗದೆ ನಿಮ್ಮ ಮನೆ ಬಾಗಿಲಿನಲ್ಲಿಯೇ ದೊರೆಯುತ್ತಿರುವ ಉತ್ತಮವಾದ ವೈದ್ಯಕೀಯ ಆರೋಗ್ಯಸೇವೆಯನ್ನು ಸದ್ಭಳಕೆ ಮಾಡಿಕೊಂಡು ನೂರ್ಕಾಲ ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಮನವಿ ಮಾಡಿದರು.
ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅಪೂರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಂಡ್ಯ ನಗರದಲ್ಲಿ ಯಶಶ್ವಿ ಹೋಟೆಲ್ ಉದ್ಯಮಿಗಳಾಗಿರುವ ಅನಿಲ್ ಅವರು ಶಿಸ್ತು ಮತ್ತು ಬದ್ಧತೆಗೆ ಹೆಸರಾಗಿದ್ದಾರೆ. ಪ್ರಸ್ತುತ ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮವಾದ ವೈದ್ಯಕೀಯ ಸೇವೆ ನೀಡಲು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸುವ ಸಾಹಸ ಮಾಡಿದ್ದಾರೆ. ಅನಿಲ್ ಮತ್ತು ಬೋರೇಗೌಡ ಆವರಿಗೆ ಶುಭ ಕೋರುತ್ತೇನೆ ಎಂದು ಅಭಿಮಾನದಿಂದ ಹೇಳಿದರು.
ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕೆ. ಆರ್. ಪೇಟೆ ತಾಲೂಕಿನ ಜನತೆಗೆ ಉತ್ತಮವಾದ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಸಾಹಸ ಕಾರ್ಯಕ್ಕೆ ಮುಂದಾಗಿರುವ ಅನಿಲ್, ಬೋರೇಗೌಡ ಸ್ನೇಹಿತರ ಸಾಹಸ ಕಾರ್ಯವನ್ನು ಶ್ಲಾಘಸಿದರು.
ಸಮಾಜಸೇವಕ ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ, ಪುರಸಭೆ ಅಧ್ಯಕ್ಷೆ ಪಂಕಜಾ, ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್, ವೀರಶೈವ ಮಹಾ ಸಭಾದ ತಾಲೂಕು ಘಟಕದ ಅಧ್ಯಕ್ಷ ಸುಜೇಂದ್ರ, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸುಬ್ರಮಣ್ಯ, ಪುರಸಭೆ ಸದಸ್ಯರಾದ ಡಿ. ಪ್ರೇಮಕುಮಾರ್, ಕೆ.ಎಸ್. ಪ್ರಮೋದ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾಟನಹಳ್ಳಿ ಗಂಗಾಧರ್, ಕನ್ನಡ ಸೇನೆಯ ಮಂಡ್ಯ ಜಿಲ್ಲಾ ಅಧ್ಯಕ್ಷ ಮಂಜುನಾಥ್, ತಾಲೂಕು ಅಧ್ಯಕ್ಷ ಸುರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿ ಡಾ.ಶಶಿಧರ್, ಪಾಂಡವಪುರ ತಾಲೂಕು ಆರೋಗ್ಯಾಧಿಕಾರಿ ಸಿ.ಎ. ಅರವಿಂದ್, ಗ್ರಾಮಾಂತರ ಠಾ ಣೆ ಪೊಲೀಸ್ ಇನ್ಸ್ ಪೆಕ್ಟರ್ ಆನಂದ್ ಗೌಡ, ನವೀನ್ ಸೇರಿದಂತೆ ನೂರಾರು ಜನರು ನ್ಯೂ ಅಪೂರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
*ವರದಿ, ರಾಜು ಜಿ ಪಿ ಕಿಕ್ಕೇರಿ ಕೆ ಆರ್ ಪೇಟೆ*
What's Your Reaction?






