ಕೆ.ಆರ್.ಪೇಟೆ : ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತ ಬಲಿ

ಕೆ.ಆರ್.ಪೇಟೆ : ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತ ಬಲಿ

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ರೈತನೊಬ್ಬನನ್ನು ಬಲಿ ಪಡೆದಿರುವ ಘಟನೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಕಟ್ಟೆಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರವಿಕುಮಾರ್.43 ಸಾವಿಗೀಡಾದ ಪ್ರಗತಿಪರ ರೈತ.

ರವಿಕುಮಾರ್ ರಾಜೇನಹಳ್ಳಿ ಗ್ರಾಮದಲ್ಲಿ ವಾಸವಿದ್ದು

ಗುರುವಾರ ಮದ್ಯಾಹ್ನ ಎರಡು ಗಂಟೆಯ ಸಮಯದಲ್ಲಿ ಕಟ್ಟೆಕ್ಯಾತನಹಳ್ಳಿ ಬಳಿ ಇರುವ ತಮ್ಮ ಜೀಮೀನಿನಲ್ಲಿ ಹುಲ್ಲು ಕುಯ್ಯಲು ತೆರಳಿದ್ದ ಸಮಯದಲ್ಲಿ ಟಿಸಿಯಿಂದ ವಿದ್ಯುತ್ ತಂತಿ ತುಂಡಾಗಿರುವುದನ್ನು ಗಮನಿಸದೇ ಬದುವಿನ ಮೇಲೆ ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

 ಸಂಜೆಯಾದರೂ ಮನೆಗೆ ಬರದ ರವಿಕುಮಾರ್ ರವರನ್ನು ಹುಡುಕಿಕೊಂಡು ತನ್ನ ಭಾವಮೈದುನ ಜಮೀನಿನ ಬಳಿ ಬಂದು ಹುಡುಕಾಟ ನಡೆಸಿದ್ದಾರೆ ಅಲ್ಲಿ ರವಿಕುಮಾರ್ ಶವ ಪತ್ತೆಯಾಗಿದೆ. 

ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು ಚೆಸ್ಕಾಂ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದ್ದು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

What's Your Reaction?

like

dislike

love

funny

angry

sad

wow