ಯುವ ಕಾಂಗ್ರೆಸ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಂಜುನಾಥ್ ರವರು ಕೊಳ್ಳೇಗಾಲಕ್ಕೆ ಬೇಟಿ:

ಯುವ ಕಾಂಗ್ರೆಸ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಂಜುನಾಥ್ ರವರು    ಕೊಳ್ಳೇಗಾಲಕ್ಕೆ ಬೇಟಿ:

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕು ಪಟ್ಟಣಕ್ಕೆ ಯುವ ಕಾಂಗ್ರೆಸ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಂಜುನಾಥ್ ರವರು ಭೇಟಿ

ನೀಡಿ ಪಟ್ಟಣದಲ್ಲಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ

 ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮರ್ಥ ನಾಯಕರನ್ನು ಆಯ್ಕೆ ಮಾಡಬೇಕಾದರೆ ಆಂತರಿಕ ಚುನಾವಣೆಯನ್ನು ನಡೆಸಬೇಕಾಗುತ್ತದೆ.

 ಚುನಾವಣೆಯನ್ನು ನಡೆಸಲು ಪಕ್ಷದ ಹಾಗೂ ರಾಷ್ಟ್ರೀಯ ನಾಯಕರಾದ ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಮೂಲ ಮುಖ್ಯ ಉದ್ದೇಶವೇನೆಂದರೆ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಕನಿಷ್ಠ ಕುಟುಂಬದಿಂದ ಬಂದವರು ಅವರವರ ವ್ಯಾಪ್ತಿಯ ಪ್ರದೇಶದಲ್ಲಿ ರಾಜ್ಯ ಹಾಗೂ ಜಿಲ್ಲೆ ಮತ್ತು ತಾಲೂಕಿನ ಜನರ ನಾಯಕತ್ವವನ್ನು ಯುವಕರ ಪಡೆ ವಹಿಸಬೇಕೆಂಬುದು ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಮೂಲ ಮುಖ್ಯ ಉದ್ದೇಶವಾಗಿದೆ.

 ರಾಜ್ಯದಲ್ಲಿ ಸದ್ಯದಲ್ಲೇ ಯೂಥ್ ಕಾಂಗ್ರೆಸ್ ಚುನಾವಣೆ ನಡೆಯುತ್ತಿದ್ದು ಇವರಿಗೆ ಒಟ್ಟು ಸುಮಾರು 20 ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೊಂದನೇ ಆಗಿದೆ ಎಂದು ತಿಳಿಸಿದರು.

 ಇದೇ ಸಂದರ್ಭದಲ್ಲಿ ಯೂಥ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ ದೊರೆರಾಜ್, ಮುಖಂಡ ಜಿಎನ್ ಲೋಕೇಶ್, ನಂಜುಂಡ ಶೆಟ್ಟಿ, ಯೋಗೇಂದ್ರ, ಇನ್ನು ಹಲವು ಯೂಥ್ ಕಾಂಗ್ರೆಸ್ ನ ಪದಾಧಿಕಾರಿಗಳು ಸದಸ್ಯರುಗಳು ಭಾಗವಹಿಸಿದ್ದರು.

ವರದಿ:ಜಿ.ಸಾಮುವೇಲ್ 

ಜಿಲ್ಲಾ ವರದಿ ಗಾರರು.

ಚಾಮರಾಜನಗರ ಜಿಲ್ಲೆ.

What's Your Reaction?

like

dislike

love

funny

angry

sad

wow